Bannanje Sanjeeva Suvarna Felicitation | ಬನ್ನಂಜೆ ಸಂಜೀವ ಸುವರ್ಣರಿಗೆ ಅಭಿನಂದನೆ ಮತ್ತು ಪ್ರಶಸ್ತಿ ಪ್ರದಾನ

ಕರುಣ ಸಂಜೀವ

ಯಕ್ಷಗಾನ ಗುರು
ಬನ್ನಂಜೆ ಸಂಜೀವ ಸುವರ್ಣರಿಗೆ ಅಭಿನಂದನೆ ಮತ್ತು ಪ್ರಶಸ್ತಿ ಪ್ರದಾನ

ಜುಲೈ 15, 2018 ರವಿವಾರ
ಸ್ಥಳ: ಪುರಭವನ, ಅಜ್ಜರಕಾಡು, ಉಡುಪಿ

ಬನ್ನಂಜೆ ಸಂಜೀವ ಸುವರ್ಣ…
ಯಕ್ಷಗಾನ ವಲಯದಲ್ಲಿ ‘ಗುರು’ ಎಂದೇ ಮಾನಿಸಲ್ಪಡುವ ಬನ್ನಂಜೆ ಸಂಜೀವ ಸುವರ್ಣ ಅವರು 20 ಕ್ಕಿಂತಲೂ ಅಧಿಕ ಗುರುಗಳಿಂದ ಯಕ್ಷಗಾನ ಕಲಿತು, ಹದಿನೆಂಟು ವರ್ಷಗಳ ಕಾಲ ಕೋಟ ಶಿವರಾಮ ಕಾರಂತರಿಗೆ ನಿಕಟರಾಗಿ ಅವರ ಯಕ್ಷಗಾನ ಪ್ರಯೋಗದ ತಂಡದಲ್ಲಿದ್ದು, ಕೆಲವು ಕಾಲ ಬಿ. ವಿ. ಕಾರಂತರೊಂದಿಗೆ ಒಡನಾಡಿ, ಮಾಯಾರಾವ್ ಅವರೊಂದಿಗೆ ಕೊರಿಯೋಗ್ರಫಿ ಕಲಿತು, ಎರಡನೆಯ ತರಗತಿಯ ಶಾಲಾವಿದ್ಯೆ ಪಡೆಯದಿದ್ದರೂ ಅಮೆರಿಕ, ಇಂಗ್ಲಾಡ್, ಇಟಲಿ, ರಷ್ಯಾ, ಫ್ರಾನ್‌ಸ್‌, ಸಿಂಗಾಪುರ ಮುಂತಾದ ನಲ್ವತ್ತಕ್ಕಿಂತಲೂ ಅಧಿಕ ದೇಶಗಳಲ್ಲಿ ಓಡಾಡಿ, ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸಿ… ಹೀಗೆ ಸಂಜೀವ ಸುವರ್ಣರ ಬದುಕು ಕಲ್ಪನೆಯ ಕಥನದಂತಿದೆ. ಉಡುಪಿಯ ಯಕ್ಷಗಾನ ಕೇಂದ್ರದಲ್ಲಿ ಪ್ರಾಚಾರ್ಯರಾಗಿರುವ ಬನ್ನಂಜೆ ಸಂಜೀವ ಸುವರ್ಣರು ಇನ್ನೇನು, ಒಂದು ವರ್ಷ ಕಳೆದರೆ 65ರ ಹೊಸ್ತಿಲಲ್ಲಿರುತ್ತಾರೆ. ಇತ್ತೀಚೆಗಷ್ಟೇ ಫ್ರಾನ್‌ಸ್‌‌ನಲ್ಲಿ ಹತ್ತು ದೇಶಗಳ ಕಲಾವಿದರ ಸಮಕ್ಷ ಯಕ್ಷಗಾನದ ದಿಗ್ವಿಿಜಯ ನಡೆಸಿ ಬಂದಿದ್ದಾರೆ. ಪತ್ನಿ ವೇದಾವತಿ ಮತ್ತು ಇಬ್ಬರು ಮಕ್ಕಳೊಂದಿಗೆ ನೆಲೆಸಿರುವ ಸಂಜೀವ ಸುವರ್ಣರ ಮನೆಯ ಹೆಸರು- ‘ಗುರುದಕ್ಷಿಣೆ’.

0 Comments

Submit a Comment

Your email address will not be published. Required fields are marked *

Related Articles

Related

Dignitaries on Bannanje Sanjeeva Suvarna | ಬನ್ನಂಜೆ ಸಂಜೀವ ಸುವರ್ಣರ ಕುರಿತಾಗಿ ಗಣ್ಯರ ಮಾತುಗಳು

https://www.youtube.com/watch?v=BScAYmOPOjM ಕರುಣ ಸಂಜೀವ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರಿಗೆ ಅಭಿನಂದನೆ ಮತ್ತು ಪ್ರಶಸ್ತಿ ಪ್ರದಾನ ಜುಲೈ 15, 2018 ರವಿವಾರ ಸ್ಥಳ: ಪುರಭವನ, ಅಜ್ಜರಕಾಡು, ಉಡುಪಿ ಬನ್ನಂಜೆ ಸಂಜೀವ ಸುವರ್ಣ... ಯಕ್ಷಗಾನ ವಲಯದಲ್ಲಿ ‘ಗುರು’ ಎಂದೇ ಮಾನಿಸಲ್ಪಡುವ ಬನ್ನಂಜೆ ಸಂಜೀವ ಸುವರ್ಣ ಅವರು...

ಸಂಪೂರ್ಣ ರಾಮಾಯಣ – ಯಕ್ಷಗಾನ ಪ್ರಸಂಗ | The Comprehensive Tale Of Ramayana | A Yakshagana Performance

https://youtu.be/qLC89a7Az9c?si=qWh7QDq7d71I4F-b ಕವಿ ಪಾರ್ತಿಸುಬ್ಬ ಅವರ ಪ್ರಸಿದ್ಧ ಯಕ್ಷಗಾನ ಪ್ರಸಂಗ ‘ಸಂಪೂರ್ಣ ರಾಮಾಯಣ’. ಇದರ ಪ್ರದರ್ಶನ, ಕೆ. ಹೆಮ್ಮನಹಳ್ಳಿಯ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ,ದಿನಾಂಕ:10.09.2023ರಲ್ಲಿ ನಡೆಯಿತು. ಧರ್ಮಸ್ಥಳದ ನಿಡ್ಲೆಯ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ (ರಿ) ಅವರಿಂದ...

ಮಹಿಷಮರ್ಧಿನಿ ಶ್ರೀದೇವಿ ಮಹಾತ್ಮೆ

https://youtu.be/f0cIrOKwxDg?si=5KP1LCJMo32ZSOeS ದಿನಾಂಕ 07.09.2022 ಬುಧವಾರ ಮೈಸೂರಿನ ಜಗನ್ಮೋಹನ ಅರಮನೆಯಲ್ಲಿ ನಡೆದ ಮಹಿಷಮರ್ಧಿನಿ ಶ್ರೀದೇವಿ ಮಹಾತ್ಮೆ ತೆಂಕುತಿಟ್ಟು ಯಕ್ಷಗಾನ ಬಯಲಾಟ ಕವಿ : ಅಗರಿ ಶ್ರೀನಿವಾಸ ಭಾಗವತರುದ.ಕ.ಜಿಲ್ಲೆಯ ಶಿಶಿಲದ ಶ್ರೀ ವನದುರ್ಗಾ ಕೃಪಾಪೋಷಿತ ನಡುಮನೆ ಯಕ್ಷಗಾನ ತಂಡ ಹಿಮ್ಮೇಳಭಾಗವತರು :...