Yakshagana Demonstration by Sanjeeva Suvarna | ಬನ್ನಂಜೆ ಸಂಜೀವ ಸುವರ್ಣರಿಂದ ಯಕ್ಷಗಾನ ಪ್ರಾತ್ಯಕ್ಷಿಕೆ

ಕರುಣ ಸಂಜೀವ

ಯಕ್ಷಗಾನ ಗುರು
ಬನ್ನಂಜೆ ಸಂಜೀವ ಸುವರ್ಣರಿಗೆ ಅಭಿನಂದನೆ ಮತ್ತು ಪ್ರಶಸ್ತಿ ಪ್ರದಾನ

ಜುಲೈ 15, 2018 ರವಿವಾರ
ಸ್ಥಳ: ಪುರಭವನ, ಅಜ್ಜರಕಾಡು, ಉಡುಪಿ

ಬನ್ನಂಜೆ ಸಂಜೀವ ಸುವರ್ಣರಿಂದ ಯಕ್ಷಗಾನ ಪ್ರಾತ್ಯಕ್ಷಿಕೆ
ಸಹಕಾರ : ಯಕ್ಷಗಾನ ಕೇಂದ್ರದ ಗುರುಗಳು ಮತ್ತು ವಿದ್ಯಾರ್ಥಿಗಳು

ಬನ್ನಂಜೆ ಸಂಜೀವ ಸುವರ್ಣ…
ಯಕ್ಷಗಾನ ವಲಯದಲ್ಲಿ ‘ಗುರು’ ಎಂದೇ ಮಾನಿಸಲ್ಪಡುವ ಬನ್ನಂಜೆ ಸಂಜೀವ ಸುವರ್ಣ ಅವರು 20 ಕ್ಕಿಂತಲೂ ಅಧಿಕ ಗುರುಗಳಿಂದ ಯಕ್ಷಗಾನ ಕಲಿತು, ಹದಿನೆಂಟು ವರ್ಷಗಳ ಕಾಲ ಕೋಟ ಶಿವರಾಮ ಕಾರಂತರಿಗೆ ನಿಕಟರಾಗಿ ಅವರ ಯಕ್ಷಗಾನ ಪ್ರಯೋಗದ ತಂಡದಲ್ಲಿದ್ದು, ಕೆಲವು ಕಾಲ ಬಿ. ವಿ. ಕಾರಂತರೊಂದಿಗೆ ಒಡನಾಡಿ, ಮಾಯಾರಾವ್ ಅವರೊಂದಿಗೆ ಕೊರಿಯೋಗ್ರಫಿ ಕಲಿತು, ಎರಡನೆಯ ತರಗತಿಯ ಶಾಲಾವಿದ್ಯೆ ಪಡೆಯದಿದ್ದರೂ ಅಮೆರಿಕ, ಇಂಗ್ಲಾಡ್, ಇಟಲಿ, ರಷ್ಯಾ, ಫ್ರಾನ್‌ಸ್‌, ಸಿಂಗಾಪುರ ಮುಂತಾದ ನಲ್ವತ್ತಕ್ಕಿಂತಲೂ ಅಧಿಕ ದೇಶಗಳಲ್ಲಿ ಓಡಾಡಿ, ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸಿ… ಹೀಗೆ ಸಂಜೀವ ಸುವರ್ಣರ ಬದುಕು ಕಲ್ಪನೆಯ ಕಥನದಂತಿದೆ. ಉಡುಪಿಯ ಯಕ್ಷಗಾನ ಕೇಂದ್ರದಲ್ಲಿ ಪ್ರಾಚಾರ್ಯರಾಗಿರುವ ಬನ್ನಂಜೆ ಸಂಜೀವ ಸುವರ್ಣರು ಇನ್ನೇನು, ಒಂದು ವರ್ಷ ಕಳೆದರೆ 65ರ ಹೊಸ್ತಿಲಲ್ಲಿರುತ್ತಾರೆ. ಇತ್ತೀಚೆಗಷ್ಟೇ ಫ್ರಾನ್‌ಸ್‌‌ನಲ್ಲಿ ಹತ್ತು ದೇಶಗಳ ಕಲಾವಿದರ ಸಮಕ್ಷ ಯಕ್ಷಗಾನದ ದಿಗ್ವಿಿಜಯ ನಡೆಸಿ ಬಂದಿದ್ದಾರೆ. ಪತ್ನಿ ವೇದಾವತಿ ಮತ್ತು ಇಬ್ಬರು ಮಕ್ಕಳೊಂದಿಗೆ ನೆಲೆಸಿರುವ ಸಂಜೀವ ಸುವರ್ಣರ ಮನೆಯ ಹೆಸರು- ‘ಗುರುದಕ್ಷಿಣೆ’.

Related Articles

Related

Urulu । ಉರುಳು

ಸುವರ್ಣ ಪ್ರತಿಷ್ಟಾನ ಮಂಗಳೂರು ಪ್ರಸ್ತುತ ಪಡಿಸುವ ಕನ್ನಡ ನಾಟಕ ಉರುಳುಹಿಂದಿ ಮೂಲ: ಡಾ. ಶಂಕರ್ ಶೇಷ್ರೂಪಾಂತರ ಮತ್ತು ನಿರ್ದೇಶನ: ಸದಾನಂದ ಸುವರ್ಣ A presentation of Suvarna pratishtana, Mangaluru.UruluHindi original: Dr. Shankar SheshDesign, Direction: Sadanand...

Male nilluvavarege | ಮಳೆ ನಿಲ್ಲುವವರೆಗೆ

ಸುವರ್ಣ ಪ್ರತಿಷ್ಟಾನ ಮಂಗಳೂರು ಪ್ರಸ್ತುತ ಪಡಿಸುವ ಕನ್ನಡ ನಾಟಕಮಳೆ ನಿಲ್ಲುವವರೆಗೆಮೂಲ: ಡೆಡ್ಲಿ ಗೇಮ್ಅನುವಾದ: ದಿ. ಸುಧೀಂದ್ರನಿರ್ದೇಶನ: ಸದಾನಂದ್ ಸುವರ್ಣ A presentation of Suvarna pratishtana, Mangaluru.Male nilluvavaregeoriginal: deadly gametranslation: D...